ಯಕ್ಷರಂಗದ ಮೇರು, ಹರಿದಾಸ ಮಲ್ಪೆ ರಾಮದಾಸ ಸಾಮಗರು ಎಪ್ರಿಲ್ 27, ಮಂಗಳವಾರ ಅಪರಾಹ್ನ ನಿಧನರಾದರು. ಯಕ್ಷಗಾನ, ಹರಿಕಥೆ, ತಾಳಮದ್ದಳೆ, ಬಯಲಾಟಗಳಲ್ಲಿ ಸುಮಾರು ಐದಾರು ದಶಕಗಳ ಕಾಲ ಮಿಂಚಿ, ಹೊಸ ಹುರುಪನ್ನು ಸ್ಥಾಪಿಸಿದವರು. ಸಂಸ್ಕೃತ, ಕನ್ನಡ, ಸಾಹಿತ್ಯ, ಸಂಗೀತ ಕ್ಷೇತ್ರದ ಆಳ ವಿದ್ವತ್ ಹೊಂದಿದ ಸಾಮಗರು, ತುಳು ಭಾಷೆಗೆ ತನ್ನ ಪಾತ್ರಗಳ ಮೂಲಕ ಕೊಟ್ಟ ಕೊಡುಗೆ ಅಪಾರ. ತೆಂಕು-ಬಡಗು ತಿಟ್ಟುಗಳ ವಿವಿಧ ಮೇಳಗಳಲ್ಲಿ ವ್ಯವಸಾಯ ಮಾಡಿದ ಸಾಮಗರು ಎರಡು ವರುಷಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ, ಒಂದು ಕಾಲನ್ನು ಕಳೆದುಕೊಂಡರು. ಅಲ್ಲಿಂದೀಚೆಗೆ ಪತ್ನಿ ನಾಗರತ್ನ ಅವರ ಆಸರೆ.
* ಜನನ ದಿನಾಂಕ : 20-6-1926 * ತಂದೆ : ಮಲ್ಪೆ ಲಕ್ಷ್ಮೀನಾರಾಯಣ ಸಾಮಗ * ತಾಯಿ : ಲಕ್ಷ್ಮೀ ಅಮ್ಮ * ಅಣ್ಣ : ಮಲ್ಪೆ ಶಂಕರನಾರಾಯಣ ಸಾಮಗ * ಮಲ್ಪೆ ಎಲಿಮೆಂಟರಿ ಶಾಲೆ, ಕೊಡವೂರು ಹಾಯರ್ ಪ್ರೈಮರಿ ಶಾಲೆಗಳಲ್ಲಿ ಓದು. ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ಮೆಟ್ರಿಕ್ಯುಲೇಶನ್ ಪಾಸ್. ನಂತರ ಉಡುಪಿ ಸಂಸ್ಕ್ರತ ಕಾಲೇಜಿನಲ್ಲಿ ವಿದ್ಯಾರ್ಜನೆ. * 1947ರಲ್ಲಿ ನಾಗರತ್ನ ಇವರೊಂದಿಗೆ ವಿವಾಹ * ಐವರು ಮಕ್ಕಳು - ವಾರಿಜಾ, ವಾಸುದೇವ, ಅಶೋಕ (ದಿವಂಗತ), ಮಾಲಿನಿ, ಅಂಬುಜಾ * ರಾಮದಾಸ ಸಾಮಗರ ನಿಧನ - 27-4-2010 - ಮಣಿಪಾಲ ಆಸ್ಪತ್ರೆಯಲ್ಲಿ * ದೇಹಸಂಸ್ಕಾರ - 28-4-2010, ಬೆಳಿಗ್ಗೆ 9-45, ಕೊಡವೂರು ಗ್ರಾಮದ ಮೂಡಬೆಟ್ಟು ಸ್ವಗೃಹದಲ್ಲಿ.
- ಅಗಲಿದ ಹಿರಿಯ ಚೇತನಕ್ಕೆ ಕಂಬನಿ -

No comments:
Post a Comment